30/04/2026
*ಐನಾಪುರದಲ್ಲಿ ಹಾರಕೂಡ ಶ್ರೀಗಳ 963ನೇ ತುಲಾಭಾರ - ಶ್ರೀ ಸಾಯಿಬಾಬಾ ಮಂದಿರದ ಕಳಸಾರೋಹಣ*
ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದ ಸಾಯಿಬಾಬಾ ಲೇಔಟ್ ನಲ್ಲಿ ಹಾರಕೂಡದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರ ಪಾವನ ಸಾನಿಧ್ಯದಲ್ಲಿ ಶ್ರೀ ಸಾಯಿಬಾಬಾ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸಾರೋಹಣ ಸಮಾರಂಭ ಜರಗಿತು.
ಸಮಾರಂಭದ ನಿಮಿತ್ಯ ಜರುಗಿದ ಧರ್ಮ ಸಭೆಯನ್ನು ಹಾರಕೂಡದ ಪರಮ ಪೂಜ್ಯರು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿ, ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಹಾರಕೂಡ ಶ್ರೀಗಳ 963ನೇ ತುಲಾಭಾರ ಜರುಗಿತು.
ಕಾರ್ಯಕ್ರಮಕ್ಕೂ ಮೊದಲು ಅಲಂಕೃತ ಸಾರೋಟಿನಲ್ಲಿ ಪೂಜ್ಯರ ಅದ್ದೂರಿ ಮೆರವಣಿಗೆ ಜರುಗಿತು.