ಹಿರೇಮಠ ಸಂಸ್ಥಾನ ಭಾಲ್ಕಿ

  • Home
  • India
  • Bhalki
  • ಹಿರೇಮಠ ಸಂಸ್ಥಾನ ಭಾಲ್ಕಿ

ಹಿರೇಮಠ ಸಂಸ್ಥಾನ ಭಾಲ್ಕಿ ಹಿರೇಮಠ ಸಂಸ್ಥಾನ ಭಾಲ್ಕಿ

ಹಿರೇಮಠ ಸಂಸ್ಥಾನ ಕನ್ನಡದ ಮಠ, ಬಸವ ತತ್ವದ ಮಠ, ಇದು ಜನತೆಯ ಮಠ, ನಮ್ಮೆಲ್ಲರ ಮಠ. ಬಸವಣ್ಣನವರನ್ನು ಹಾಸಿಕೊಂಡು, ಹೊದ್ದುಕೊಂಡಿರುವಂಥ ಮಠ. ಇವನಾರು, ಇವನಾರು? ಎಂದು ಕೆಳದೇ ಎಲ್ಲರೂ ನಮ್ಮವರೆನ್ನುವ ಮಠ. ಬಡವರಿಗೆ, ದೀನರಿಗೆ, ದಲಿತರಿಗೆ, ಅಂಗವಿಕಲರಿಗೆ, ಅಬಲೆಯರಿಗೆ, ವಿಧವೆಯರಿಗೆ, ಅನಾಥರಿಗೆ, ಕಲಾವಿದಾರಿಗೆ ಆಶ್ರಯ ನೀಡಿರುವಂಥ ಮಠ. ಖ್ಯಾತ ಸಂಶೋಧಕರಾದ ಎಂ. ಎಂ. ಕಲಬುರ್ಗಿಯವರು “ ನಾಡಿನ ಗುರುಸ್ಥಲ ಮಠಗಳಿಗೆ ಭಾಲ್ಕಿ ಮಠ ಮಾದರಿ ಹಾಗೂ ನಾಡಿನ ವಿರಕ್ತ ಮಠಗಳಿಗೆ ಇಳಕಲ ಮಠ ಮಾದರಿ” ಎಂದು ಬರೆದಿರುವುದು ಇಲ್ಲಿ ಸ್ಮರಿಸಬಹುದು.

19/02/2026

ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಿಮಿತ್ಯ ಅಭಿನಂದನ ಸಮಾರಂಭ ಭಾಲ್ಕಿಯಲ್ಲಿ ಜರುಗಿತು.

ಪರಮ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅಪ್ಪಾಜಿ ಅವರ ಅಮೃತ ಮಹೋತ್ಸವ ಏಪ್ರಿಲ್ 21,  21 & 22 2026 ರಂದು ಎಲ್ಲರೂ ಹೆಚ್ಚಿನ ಸಂಖ್ಯೆ...
19/02/2026

ಪರಮ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅಪ್ಪಾಜಿ ಅವರ ಅಮೃತ ಮಹೋತ್ಸವ ಏಪ್ರಿಲ್ 21, 21 & 22 2026 ರಂದು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.

19/02/2026

ನಾಡೋಜ ಪರಮ ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದೇವರು #ಬಸವರ

https://whatsapp.com/channel/0029Va7wOjz6WaKw1PMqT63F
29/01/2026

https://whatsapp.com/channel/0029Va7wOjz6WaKw1PMqT63F

Channel • 184 followers • Facebook: https://www.facebook.com/share/1KmwgAHWnZ/
Instagram: https://www.instagram.com/hiremath_bhalki?igsh=NnNyZTRyZWVtdjRo
ಹಿರೇಮಠ ಸಂಸ್ಥಾನ ಕನ್ನಡದ ಮಠ, ಬಸವ ತತ್ವದ ಮಠ, ಇದು ಜನತೆಯ ಮಠ, ನಮ್ಮೆಲ್ಲರ ಮಠ. ಬಸವಣ್ಣನವರನ್ನು ಹಾಸಿಕೊಂಡು, ಹೊದ್ದುಕೊಂಡಿರುವಂಥ ಮಠ. ಇವನಾರು, ಇವನಾರು? ಎಂದು ಕೆಳದೇ ಎಲ್ಲರೂ ನಮ್ಮವರೆನ್ನುವ ಮಠ. ಬಡವರಿಗೆ, ದೀನರಿಗೆ, ದಲಿತರಿಗೆ, ಅಂಗವಿಕಲರಿಗೆ, ಅಬಲೆಯರಿಗೆ, ವಿಧವೆಯರಿಗೆ, ಅನಾಥರಿಗೆ, ಕಲಾವಿದಾರಿಗೆ ಆಶ್ರಯ ನೀಡಿರುವಂಥ ಮಠ. ಖ್ಯಾತ ಸಂಶೋಧಕರಾದ ಎಂ. ಎಂ. ಕಲಬುರ್ಗಿಯವರು “ ನಾಡಿನ ಗುರುಸ್ಥಲ ಮಠಗಳಿಗೆ ಭಾಲ್ಕಿ ಮಠ ಮಾದರಿ ಹಾಗೂ ನಾಡಿನ ವಿರಕ್ತ ಮಠಗಳಿಗೆ ಇಳಕಲ ಮಠ ಮಾದರಿ” ಎಂದು ಬರೆದಿರುವುದು ಇಲ್ಲಿ ಸ್ಮರಿಸಬಹುದು.

ಮಠಗಳೆಂದರೆ ಮತ - ಧರ್ಮ ಸಂರಕ್ಷಣೆ ಎಂಬ ಸಿದ್ಧನಂಬಿಕೆಗಳನ್ನು ಮುರಿದು ನಾಡು ನುಡಿ ಸಂರಕ್ಷಣೆಗೆ ನಿಂತು. ಕನ್ನಡ ಉಳಿದರೆ ಮಾತ್ರ ಧರ್ಮ ಉಳಿಯುತ್ತದೆಂದು ಬಲವಾಗಿ ಪ್ರತಿಪಾದಿಸಿದ್ದೇ ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಅದರ ಪೀಠಾಧಿಪತಿಗಳಾಗಿದ್ದ ಡಾ.ಚೆನ್ನಬಸವಪಟ್ಟದ್ದೇವರು. ಬಹು ಪ್ರಾಚೀನತೆ ಹೊಂದಿರುವ ಭಾಲ್ಕಿ ಹಿರೇಮಠ ಸಂಸ್ಥಾನ ಮೂಲತಃ ಸಂಪ್ರದಾಯಶೀಲ ಮಠ. ಅದು ವೈಚಾರಿಕತೆಗೆ ತೆರೆದುಕೊಂಡಿದ್ದು, ಜನಪ್ರಿಯತೆಗೆ ಬಂದದ್ದು ಡಾ. ಚೆನ್ನಬಸವ ಪಟ್ಟದೇವರಿಂದ. ಈ ಜನಪ್ರಿಯತೆ ತಂದುಕೊಟ್ಟಿದ್ದೆ ಶ್ರೀಗಳ ಕನ್ನಡ ಪ್ರೀತಿಯಿಂದ.

ಡಾ. ಚೆನ್ನಬಸವ ಪಟ್ಟದೇವರಿಗೆ ಕನ್ನಡ ಕೇವಲ ಭಾಷೆಯಾಗಿ ಕಾಣಲಿಲ್ಲ ಬದಲಿಗೆ ಕನ್ನಡವೆಂದರೆ ಜನತೆ ಶತಮಾನಗಳಿಂದ ಆಚರಿಸಿಕೊಂಡು ಬಂದ ಸಂಪ್ರದಾಯ, ನಂಬಿಕೆ, ಸಂಸ್ಕೃತಿ, ಒಟ್ಟು ಜೀವನ ವಿಧಾನ. ಆದ್ದರಿಂದ ಕನ್ನಡವೆಂದರೆ ಜನತೆಯ ಬದುಕು ಎಂದು ಭಾವಿಸಿ ಕನ್ನಡದ ಉಳಿವೆಂದರೆ ಅದು ಕನ್ನಡಿಗರ ಉಳಿವೆಂದು ತಿಳಿದರು. ಆ ಕಾರಣಕ್ಕಾಗಿಯೇ ಹ್ಶೆದ್ರಾಬಾದ ಕನರ್ಾಟಕ ವಿಮೋಚನೆ, ಕನ್ನಡ ಏಕೀಕರಣ, ಕನರ್ಾಟಕದ ಪುನರ್ ನಾಮಕರಣಕ್ಕಾಗಿ ಹೋರಾಡಿದರು. ಈ ಹೋರಾಟಕ್ಕೆ ಕನ್ನಡ ಮಾಧ್ಯಮ ಶಿಕ್ಷಣವನ್ನು ಅಸ್ತ್ರವಾಗಿ ಬಳಸಿದರು. ಅದಕ್ಕೆ ಕಾರಣವೂ ಇತ್ತು. ಡಾ. ಚೆನ್ನಬಸವ ಪಟ್ಟದೇವರು. ಹಾನಗಲ್ ಶಿವಯೋಗ ಮಂದಿರದಲ್ಲಿ ತರಬೇತಿಯನ್ನು ಪಡೆದ ಮೇಲೆ 1924ರಲ್ಲಿ ನಡೆದ ಭಾಲ್ಕಿ ಹಿರೇಮಠದ ಪೀಠಾರೋಹಣದಂದು. ಶಿವಯೋಗ ಮಂದಿರದಲ್ಲಿ ತರಬೇತಿ ನೀಡಿದ ಹಾನಗಲ್ ಕುಮಾರ ಸ್ವಾಮಿಯವರೆ ಬಂದು ತಮ್ಮ ಪ್ರೀತಿಯ ಶಿಷ್ಯನಿಗೆ ಪೀಠಾರೋಹಣ ಮಾಡಿಸಿದ್ದು, ಜೊತೆಗೆ ಮಠಕ್ಕಾಗಿ ನೀನಲ್ಲ, ನಿನಗಾಗಿ ಮಠವಿದೆ ಈ ಭಾಗದಲ್ಲಿ ಶಿಕ್ಷಣ, ಶರಣತತ್ವ, ದೀನ ದಲಿತರ ಸೇವೆಗೆ ಬದುಕು ಮೀಸಲಾಗಿರಲಿ ಎಂದು ಹೇಳಿ ಜವಾಬ್ದಾರಿಗಳನ್ನು ಹೋರಿದರು. ಆದರೆ ಮಠದ ವ್ಯವಸ್ಥೆ ಶಿಥಿಲವಾಗಿತ್ತು. ಶಾಖಾ ಮಠಗಳು ಸ್ವತಂತ್ರವೆಂಬಂತೆ ಇದ್ದವು. ಇದೆಲ್ಲ ಒಂದು ವರ್ಷದಲ್ಲಿ ಸರಿಪಡಿಸಿ ಎಲ್ಲಾ ಶಾಖಾ ಮಠಗಳು ಭಾಲ್ಕಿ ಹಿರೇಮಠದ ಆಧೀನಕ್ಕೆ ತಂದರು, ಕಾರೆಮುಂಗಿ, ಮೋರಗಿಯಲ್ಲಿರುವ ಮಠದ ಹೊಲಗಳ ಉಳುಮೆಯನ್ನು ಸ್ವತಃ ತಾವೆ ಮಾಡಿದರು.

ಬೀದರ್ ನಗರದ ಗುದಗೆ ಆಸ್ಪತ್ರೆಗೆ ಭೇಟಿ ನೀಡಿದ ಪೂಜ್ಯ ಶ್ರೀ ಡಾ ಬಸವಲಿಂಗ ಪಟ್ಟದ್ದೇವರು ವಯೋಸಹಜ ಅನಾರೋಗ್ಯದಿಂದ  ಚಿಕಿತ್ಸೆ ಪಡೆಯುತ್ತಿರುವ ಲೋಕನ...
11/01/2026

ಬೀದರ್ ನಗರದ
ಗುದಗೆ ಆಸ್ಪತ್ರೆಗೆ ಭೇಟಿ ನೀಡಿದ ಪೂಜ್ಯ ಶ್ರೀ ಡಾ ಬಸವಲಿಂಗ ಪಟ್ಟದ್ದೇವರು ವಯೋಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಲೋಕನಾಯಕ, ಶತಾಯುಷಿ, ಡಾ. ಭೀಮಣ್ಣಾ ಖಂಡ್ರೆಯವರ ಆರೋಗ್ಯ ವಿಚಾರಿಸಿ, ಆರೋಗ್ಯ ಸುಧಾರಣೆಗೆ ಬಸವಾದಿ ಶರಣರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾನ್ಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಅವರು ಹಾಗೂ ಇತರರಿದ್ದರು.

22/12/2025
22/12/2025

ಡಾ.ಚನ್ನಬಸವ ಪಟ್ಟದ್ದೇವರ 136ನೆಯ ಜಯಂತ್ಯುತ್ಸವ

12/12/2025

ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ಜಯಂತ್ಯೋತ್ಸವ

ಕಮಲನಗರದಿಂದ ಭಾಲ್ಕಿಯವರೆಗೆ ಬಸವಜ್ಯೋತಿ ಪಾದಯಾತ್ರೆ ಉದ್ಘಾಟನಾ ಸಮಾರಂಭ

08/12/2025

*ಹಿರೇಮಠ ಸಂಸ್ಥಾನ ಭಾಲ್ಕಿ

*ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರ 136ನೆಯ ಜಯಂತಿ

*ಕಮಲನಗರದಿಂದ ಭಾಲ್ಕಿಯವರೆಗೆ ಬಸವಜ್ಯೋತಿ ಪಾದಯಾತ್ರೆ

https://youtube.com/live/fGCaHyeAp4I?feature=share like share and subscribe
19/11/2025

https://youtube.com/live/fGCaHyeAp4I?feature=share like share and subscribe

ಅನುಭವಮಂಟಪ ಬಸವಕಲ್ಯಾಣಜಿ. ಬೀದರ46ನೆಯ ಶರಣಕಮ್ಮಟಅನುಭವಮಂಟಪ ಉತ್ಸವ ನಿಮಿತ್ಯಪೂಜ್ಯ ಶ್ರೀ ಬಸವೇಶ್ವರಿ ತಾಯಿ ಬಸವ ಧಾಮ ಅತ್ತಿವೇರಿ ಅವ...

05/10/2025

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಪೂಜ್ಯ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಪೂಜ್ಯರ ಆಶೀರ್ವಚನ

Address

ಹಿರೇಮಠ ಸಂಸ್ಥಾನ ಭಾಲ್ಕಿ. ಪೂಜ್ಯ . ಶ್ರೀ ಡಾ
Bhalki
585328

Alerts

Be the first to know and let us send you an email when ಹಿರೇಮಠ ಸಂಸ್ಥಾನ ಭಾಲ್ಕಿ posts news and promotions. Your email address will not be used for any other purpose, and you can unsubscribe at any time.

Contact The Place Of Worship

Send a message to ಹಿರೇಮಠ ಸಂಸ್ಥಾನ ಭಾಲ್ಕಿ:

Share