30/04/2026
ಹೊಸಪೇಟೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರ 50 ವರ್ಷಗಳ ಸಾರ್ಥಕ ಜನಸೇವೆಯ ಅಂಗವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯುವ "BSY ಅಭಿಮಾನೋತ್ಸವ" ಕಾರ್ಯಕ್ರಮದ ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿಲಾಯಿತು
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದರಾದ ಗೋವಿಂದ M ಕಾರಜೋಳ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವರಾದ B ಶ್ರೀರಾಮುಲು, ಹಾಲಪ್ಪ ಆಚಾರ, ಆನಂದ್ ಸಿಂಗ್, ಶಾಸಕರುಗಳಾದ ದೊಡ್ಡನಗೌಡ ಪಾಟೀಲ, ಕೃಷ್ಣ ನಾಯ್ಕ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಪಿ.ರಾಜೀವ್, ವಿಧಾನಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್, ಶ್ರೀಮತಿ ಹೇಮಲತಾ ನಾಯಕ್, ಶಶೀಲ್ ಜಿ ನಮೋಶಿ, ವೈ.ಎಂ ಸತೀಶ್, ಮಾಜಿ ಶಾಸಕರುಗಳಾದ ಸೋಮಶೇಖರ ರೆಡ್ಡಿ, ಪರಣ್ಣ ಮುನವಳ್ಳಿ, ನಂದಿಹಳ್ಳಿ ಹಾಲಪ್ಪ, ಬಸವರಾಜ್ ದಡೇಸೂಗೂರು, ಮಾಜಿ ಸಂಸದರಾದ ಶಿವರಾಮೇಗೌಡ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಕೆ.ಎಸ್ ದಿವಾಕರ್, ಬಳ್ಳಾರಿ ವಿಭಾಗದ ಪ್ರಭಾರಿಗಳಾದ ಅಮರನಾಥ ಪಾಟೀಲ್, ಸಹ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಹಾಪುರ, ಬಳ್ಳಾರಿ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕಾ, ವಿಜಯನಗರ ಜಿಲ್ಲಾಧ್ಯಕ್ಷರಾದ ಸಂಜೀವ್ ರೆಡ್ಡಿ, ಕೊಪ್ಪಳ ಜಿಲ್ಲಾಧ್ಯಕ್ಷರಾದ ನವೀನ್ ಗುಳ್ಳಗಣ್ಣವರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
bjym4india