10/09/2019
ಕಿನ್ಯ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಸುವರ್ಣ ಮಹೋತ್ಸವ ಉತ್ತಮವಾಗಿ ನಡೆಯಲಿ ಯಕ್ಷಗಾನ ಸಾಂಸ್ಕøತಿಕ ಸೇವೆಯನ್ನು ಇನ್ನಷ್ಟು ಈ ಸಂಸ್ಥೆ ನಡೆಸಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಾದದ ಮಾತು ಹೇಳಿದರು.
ಕಿನ್ಯ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮ ವರ್ಷಪೂರ್ತಿ ನಡೆಯುತ್ತಿದೆ. 50ನೇ ವರ್ಷದ ಸಾಧನೆಯನ್ನು ದಾಖಲಿಸುವ ಸ್ಮರಣ ಸಂಚಿಕೆಯನ್ನು ಈ ಸಂದರ್ಭದಲ್ಲಿ ಪ್ರಕಟಿಸಲು ತೀರ್ಮಾಣಿಸಲಾಗಿದೆ.
ಇದರ ಅಂಗವಾಗಿ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಪೂಜ್ಯ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ, ಅಭಿನಂದನೆ ಸಲ್ಲಿಸಿ ಸುವರ್ಣ ಮಹೋತ್ಸವದ ಕಾರ್ಯಕ್ರಮದ ವಿವರ ನೀಡಿ, ಸಹಕಾರ, ಮಾರ್ಗದರ್ಶನ ಕೇಳಿಕೊಂಡರು.
ಗ್ರಾಮೀಣ ಪರಿಸರದ ಯಕ್ಷಗಾನ ಸಂಘವೊಂದು 50 ವರ್ಷಗಳಿಂದ ನಿರಂತರ ಕಲಾ ಸೇವೆ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ.. ಇನ್ನಷ್ಟು ಕಲಾ ಸೇವೆ ಸಾಮಾಜಿಕ ಸೇವೆಯಲ್ಲಿ ಸಂಸ್ಥೆ ಮುಂದುವರೆಯಲಿ, ಸುವರ್ಣ ಮಹೋತ್ಸವದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಪೂಜ್ಯ ಶ್ರೀ.ಡಿ.ವೀರೇಂದ್ರ ಹೆಗ್ಗಡೆ ಆಶೀರ್ವಚನದ ಸಂದೇಶ ನೀಡಿದರು.
ಕಿನ್ಯ ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಗೌರವಾಧ್ಯಕ್ಷ ರಾಮಯ್ಯ ಕಿಲ್ಲೆ, ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕೃಷ್ಣ ಗಟ್ಟಿ, ಧರ್ಮ ಜಾಗೃತಿ ಅಭಿಮಾನಿ ಬಳಗದ ಅಧ್ಯಕ್ಷ ಕೃಷ್ಣ ಶಿವಕೃಪಾ, ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ, ಅಧ್ಯಾಪಕ ಮೋಹನ್ ಶಿರ್ಲಾಲ್, ಸಂಘದ ಹಿರಿಯ ಸದಸ್ಯರಾದ ನಾರಾಯಣ ಪೂಜಾರಿ, ರಾಮ ಕನಕಮುಗೇರು, ಆನಂದ ಕನಕಮುಗೇರು ಮೊದಲಾದವರು ಉಪಸ್ಥಿತರಿದ್ದರು.