27/08/2026
ಶ್ರೀ ವ್ಯಾಸರಾಜ ಪ್ರತಿಷ್ಠಾಪಿತ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ತಿಪಟೂರು.
ಆಸ್ತಿಕ ಬಂಧುಗಳೇ,
ಶ್ರಾವಣಮಾಸದ ಪ್ರಯುಕ್ತ ಪ್ರತಿ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿದು ದಿನಾಂಕ 29-08-2026 ರ ಮೂರನೇ ಶ್ರಾವಣ ಶನಿವಾರದಂದು ಮಂತ್ರಾಲಯ ಪ್ರಭುಗಳಾದ *ಶ್ರೀ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವ* ಪ್ರಯುಕ್ತ ಶ್ರೀ ಕೋಟೆ ಆಂಜನೇಯ ಸ್ವಾಮಿಯವರ ದಿವ್ಯಸಾನಿಧ್ಯದಲ್ಲಿ *ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ಸ್ವರೂಪದಲ್ಲಿ ವಿಶೇಷ ಅಲಂಕಾರ ಮಾಡಲಾಗುತ್ತಿದೆ.*
ಶ್ರೀ ಸ್ವಾಮಿಯವರ ಸನ್ನಿಧಾನದಲ್ಲಿ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಆಂಜನೇಯ ಸ್ವಾಮಿಯವರ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ.
*ಜೈ ಶ್ರೀರಾಮ*